ನವದೆಹಲಿ: ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಏಪ್ರಿಲ್ 27 ರ ಬುಧವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಚರ್ಚಿಸಲು ಸಭೆಯನ್ನು ಕರೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.
ಈ ನಡುವೆ ಭಾರತದಲ್ಲಿ ಈ ವಾರ 15,538 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ . ಪಶ್ಚಿಮ ಬಂಗಾಳವು 19 ದಿನಗಳ ಅಂತರದ ನಂತರ ಶನಿವಾರ ಕೋವಿಡ್ ಸಾವನ್ನು ದಾಖಲಿಸಿದೆ. 794 ಹೊಸ ಪ್ರಕರಣಗಳ ಸೇರ್ಪಡೆಯೊಂದಿಗೆ, ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶನಿವಾರ 15,873 ಕ್ಕೆ ಏರಿದೆ. ಇಲ್ಲಿಯವರೆಗೆ ಒಟ್ಟು ದೃಢಪಡಿಸಿದ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪಾಲು ಕಳೆದ 24 ಗಂಟೆಗಳಲ್ಲಿ ಏರಿಕೆಯಾಗಿದೆ ಮತ್ತು ಶೇಕಡಾ 0.04 ರಷ್ಟಿದೆ. ಕೋವಿಡ್ ಪ್ರಕರಣಗಳನ್ನು ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮಹತ್ವದ ಸಭೆ ಕರೆದಿದ್ದಾರೆ.