- Advertisement -
- Advertisement -
ಬೆಂಗಳೂರು :ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ . ಈ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಳೆ ಬಿಜೆಪಿ ಸಿದ್ಧತಾ ಸಭೆ ನಡೆಯಲಿದೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಶಾಸಕರು, ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಮುಖಂಡರು ಸಭೆಯಲ್ಲಿ ಬಾಗಿಯಾಗಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮ ಯಶಸ್ವಿಗೊಳಿಸುವ ಕುರಿತು ಸಭೆ ನಡೆಸಲಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಿ ನಂತರ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
- Advertisement -