- Advertisement -
- Advertisement -
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಹತ್ಯೆಯಾದ ಬೆಳ್ತಂಗಡಿಯ ಮೂರು ಮಂದಿಯ ಮನೆಗೆ ಮಂಗಳೂರಿನ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಮಾ.24 ರಂದು ಸಂಜೆ ಭೇಟಿ ನೀಡಿ ಕುಟುಂಬದವರಿಗೆ ಸ್ವಾಂತನ ಹೇಳಿದರು.
ಬೆಳ್ತಂಗಡಿ ತಾಲೂಕಿನ ಮದಡ್ಕದ ಇಸಾಕ್ ಮನೆ , ಉಜಿರೆಯ ಸಾಹುಲ್ ಹಮೀದ್ ಮನೆ, ಶಿರ್ಲಾಲಿನ ಸಿದ್ದಿಕ್ ಮನೆಗಳಿಗೆ ಮೊಹಿಯುದ್ದೀನ್ ಬಾವ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತನ ಹೇಳಿದರು.
ಬಳಿಕ ಮುಖ್ಯಮಂತ್ರಿ , ಗೃಹ ಸಚಿವರು, ತುಮಕೂರು ಪೊಲೀಸ್ ಅಧಿಕಾರಿಗಳೊಂದಿಗೆ ಫೋನ್ ಕರೆ ಮಾಡಿ ಮಾತಾನಾಡಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕಾಗಿ ಮನವಿ ಮಾಡಿದರು. ಈ ವೇಳೆ ಬೆಳ್ತಂಗಡಿಯ ಹಲವು ಮಂದಿ ಈ ನಕಲಿ ಬಂಗಾರದ ಆಸೆಗೆ ಬಿದ್ದು ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಮರ್ಯಾದೆಗೆ ಅಂಜಿ ದೂರು ಕೊಡಲು ಮುಂದೆ ಬಂದಿಲ್ಲ ಎಂದಿದ್ದಾರೆ. ಮೃತಪಟ್ಟ ಮೂವತ ಮನೆಯವರಿಗೆ ಸರಕಾರದಿಂದ ಪರಿಹಾರ ಒದಗಿಸಲು ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.
- Advertisement -