- Advertisement -
- Advertisement -
ಬದಿಯಡ್ಕ: ಇಲ್ಲಿನ ಮುಳಿಯಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳತ್ತಿಂಗಳ್ ಎಂಬಲ್ಲಿ ಕೋತಿಯೊಂದು ಮಹಿಳೆಯ ಮೇಲೆ ತೆಂಗಿನಕಾಯಿ ಎಸೆದು ಗಾಯಗೊಳಿಸಿದ ಘಟನೆ ನಡೆದಿದೆ.
ಗಾಯಗೀಡಾದವರು ಕೃಷ್ಣನ್ ನಾಯರ್ ಎಂಬುವರ ಪತ್ನಿ ಸಾವಿತ್ರಿ.
ಅವರು ಮನೆಯ ಅಂಗಳದಲ್ಲಿ ಪಾತ್ರೆ ತೊಳೆಯುತ್ತಿದ್ದಾಗ ಈ ಅವಘಡ ನಡೆದಿದ್ದು, ಇದರಿಂದಾಗಿ ಅವರ ಕೈ ಮೂಳೆ ಮುರಿದಿದ್ದು, ಚಿಕಿತ್ಸೆ ನೀಡಲಾಗಿದೆ.
ಈ ಪ್ರದೇಶದಲ್ಲಿ ಕಾಡುಪ್ರಾಣಿಗಳು ನಿರಂತರವಾಗಿ ಕೃಷಿ ನಾಶ ಮಾಡುತ್ತಿದ್ದು, ಸ್ಥಳೀಯ ನಿವಾಸಿಗಳ ಮೇಲೆ ದಾಳಿ ಮಾಡುತ್ತಿವೆ ಎನ್ನಲಾಗಿದೆ.
- Advertisement -