- Advertisement -
- Advertisement -
ಮೂಡಬಿದರೆಯ ಪ್ರತಿಷ್ಟಿತ ಖಾಸಗಿ ಕಾಲೇಜಿನ ಉದ್ಯೋಗಿ ಹಾಸ್ಟೆಲ್ ನ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಮೃತ ಯುವಕ.
ಇಲ್ಲಿಯೇ ಪ್ರತಿಕೋದ್ಯಮ ವ್ಯಾಸಂಗ ಮಾಡಿದ್ದ ಆತ ಜನವರಿಯಲ್ಲಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -