Friday, May 17, 2024
Homeತಾಜಾ ಸುದ್ದಿಕೋವಿಡ್‌ ನಂತರ ಸಾಲದ ಸುಳಿಯಲ್ಲಿ ಸಿಲುಕಿದ್ದ ಮೂಡುಬಿದಿರೆ ಮೂಲದ ಉದ್ಯಮಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು...

ಕೋವಿಡ್‌ ನಂತರ ಸಾಲದ ಸುಳಿಯಲ್ಲಿ ಸಿಲುಕಿದ್ದ ಮೂಡುಬಿದಿರೆ ಮೂಲದ ಉದ್ಯಮಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಬೆಂಗಳೂರು: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಮೂಡುಬಿದಿರೆ ಮೂಲದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಹೆಸರಘಟ್ಟ ರಸ್ತೆಯ ಹಾವನೂರು ಬಡಾವಣೆಯಲ್ಲಿ ಇದ್ದಕ್ಕಿದ್ದ ಹಾಗೆ ಅನುಮಾನಾಸ್ಪದ ರೀತಿಯಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 45 ವರ್ಷದ ಪ್ರಮೋದ್‌ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳೆದ 18 ವರ್ಷದಿಂದ ಬೆಂಗಳೂರಿನಲ್ಲಿ ಬ್ಯುಸಿನೆಸ್ ಮಾಡುತ್ತಿದ್ದ ಪ್ರಮೋದ್ ಹೆಗಡೆ ಬೆಂಗಳೂರಿನ ಪ್ರಸಿದ್ಧ ಕಂಪನಿಗಳ ಟ್ರಾನ್ಸ್ ಪೋರ್ಟ್ ಏಜೆನ್ಸಿ ನಡೆಸುತ್ತಿದ್ದರು. ಇತ್ತೀಚೆಗೆ ಕ್ರಿಕೆಟ್ ಬೆಟ್ಟಿಂಗ್ ಗೀಳು ಸಹ ಹಚ್ಚಿಸಿಕೊಂಡಿದ್ದರು ಎನ್ನಲಾಗಿದೆ. ಇದ್ದಕ್ಕಿದ್ದಂತೆ ಅದೇನಾಯ್ತ ಏನೋ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಉದ್ದಗಲಕ್ಕೂ ತನ್ನ ಟ್ರಾನ್ಸ್‌ಪೋರ್ಟ್ ಬ್ಯುಸಿನೆಸ್ ಹರಡಿಸಿದ್ದ ಪ್ರಮೋದ್ ಇತ್ತೀಚೆಗೆ ವ್ಯಾವಹಾರಿಕವಾಗಿ ಸಾಲ ಮಾಡಿದ್ದರಂತೆ. ಅಲ್ಲದೆ ತನ್ನ ಸಂಬಂಧಿಯೊಬ್ಬರ ಬಳಿ 30 ಲಕ್ಷ ಸಾಲ ಮಾಡಿದ್ದರಂತೆ. ಆದ್ರೆ ಆ ಸಾಲದ ಹಣವನ್ನ ಏನು ಮಾಡಿದ್ದರು ಎಂಬುದು ಯಾರಿಗು ಗೊತ್ತಿಲ್ಲವಂತೆ. ಅಲ್ಲದೆ ಕಳೆದ ಕೆಲ ದಿನಗಳಿಂದ ಸಾಲ ವಾಪಸ್ ತೀರಿಸಲಾಗದೆ ಬೇಸತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ ಐಪಿಎಲ್ ಬೆಟ್ಟಿಂಗ್ ಸಹ ಆಡುತ್ತಿರುವ ವಿಚಾರ ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ. ಮೊನ್ನೆ ರಾತ್ರಿ ಐಪಿಎಲ್ ಮ್ಯಾಚ್ ನೋಡುತ್ತಿದ್ದ ವೇಳೆ ತನ್ನ ಸ್ನೇಹಿತನಿಗೆ ಚಿಕನ್ ತೆಗೆದುಕೊಂಡು ಬಾ ಎಂದು ಹೇಳಿ ಹೊರ ಕಳುಹಿಸಿದವರು ಮನೆ ಒಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಯೊಬ್ಬರ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದ ಹೆಂಡತಿ ಫೋನ್ ಮಾಡಿದ್ದಾಗ ಮೃತ ಪ್ರಮೋದ್ ರಿಸೀವ್ ಮಾಡದಿದ್ದಕ್ಕೆ ಪತ್ನಿ ವೀಣಾ ಆತನ ಸ್ನೇಹಿತ ಶಶಿಗೌಡರಿಗೆ ಫೋನ್ ಮಾಡಿ ವಿಚಾರಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಾಗಲುಗುಂಟೆ ಪೊಲೀಸರು ಪ್ರಮೋದ್ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!