- Advertisement -
![]()
- Advertisement -
ಮೈಸೂರು: ಸರ್ಕಾರ ಗೋಹತ್ಯೆ ನಿಷೇಧಕಾಯ್ದೆ ಜಾರಿ ಮಾಡುತ್ತಿರುವ ಬೆನ್ನಲ್ಲೇ ಗೋಮಾಂಸದ ರಫ್ತು ಪ್ರಮಾಣವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ ಎಂಬ ಗಂಭೀರ ಆರೋಪವನ್ನು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮಾಡಿದ್ದಾರೆ.
ಅಲ್ಲದೆ ದೇಶದಲ್ಲಿ ಗೋಮಾಂಸ ರಫ್ತುಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ ಎಂಬುದನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಇಲ್ಲಿ ಗೋಹತ್ಯೆ ನಿಲ್ಲಿಸಿ ಹೊರ ದೇಶಗಳಿಗೆ ರಫ್ತು ಪ್ರಮಾಣ ಹೆಚ್ಚಿಸುವ ಹುನ್ನಾರ, ಇದರ ಹಿಂದೆ ಅಡಗಿದೆ. ಇದು ಸರಿಯಾದ ಕ್ರಮವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಸಧ್ಯ ಸಾಹಿತಿಯೊಬ್ಬರ ಈ ಹೇಳಿಕೆಯ ಪರಿಣಾಮ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.
- Advertisement -


