ಉಪ್ಪಿನಂಗಡಿ; ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ ನನ್ನು ಉಪ್ಪಿನಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹಮೀದ್ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಉಪ್ಪಿನಂಗಡಿ ಠಾಣಾ ತನಿಖಾ ಪಿಎಸ್ ಐ ರುಕ್ಮ ನಾಯ್ಕ್ ನೇತೃತ್ವದ ತಂಡ ಕಡಬದ ಆತನ ಮನೆಯಿಂದ ಅರೆಸ್ಟ್ ಮಾಡಿದ್ದಾರೆ.
ವಿಚಾರಣೆ ವೇಳೆ ಈತ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ, ಬೆದ್ರೋಡಿ ನೀರಕಟ್ಟೆ ಎಂಬಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ 10-10-2023 ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಹೆದ್ದಾರಿ 75 ರ ಅಗಲೀಕರಣ ಕಾಮಗಾರಿಗೆ ಉಪಯೋಗಿಸುವ ಕೆ.ಎನ್. ಆರ್ ಸಂಸ್ಥೆಯ ಕಬ್ಬಿಣದ ಶೀಟ್ ಗಳನ್ನು ಕಳ್ಳತನ ಮಾಡಿದ್ದ. ಈತನ ವಿರುದ್ದ ವಿವಿಧ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ .
1) ಮಂಗಳೂರು ಕಂಕನಾಡಿ ಪೊಲೀಸ್ ಠಾಣಾ ಎನ್.ಡಿ.ಪಿ.ಎಸ್ ಕಾಯ್ದೆ.2) ಮಂಗಳೂರು ಉತ್ತರ ಪೊಲೀಸ್ ಠಾಣೆ ಕನ್ನ ಕಳವು, 3) ಉಡುಪಿ ಜಿಲ್ಲೆಯ ಗಂಗೋಳ್ಳಿ ಪೊಲೀಸ್ ಠಾಣಾ ಆತ್ಮಹತ್ಯೆ ಪ್ರಚೋದನೆ, 4) ದಾವಣಗೆರೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯ ಸುಲಿಗೆ, 5) ಸಕಲೇಶಪುರ ನಗರ ಪೊಲೀಸ್ ಠಾಣಾ ಸಂಶಯಾಸ್ಪದ ವಶಕ್ಕೆ
6) ಸಕಲೇಶಪುರ ನಗರ ಪೊಲೀಸ್ ಠಾಣಾ ಸಾಮಾನ್ಯ, ಕಳವು 7) ಕಡಬ ಪೊಲೀಸ್ ಠಾಣಾ ಸಾಮಾನ್ಯ ಕಳವು. ಕನ್ನಕಳವು 8) ಬೆಂಗಳೂರು ಕೊತ್ತುಲೂರು ಪೊಲೀಸ್ ಠಾಣಾ ದರೊಡೆ ಪ್ರಕರಣ 9) ಗೋಣಿಬೀಡು ಪೊಲೀಸ್ ಠಾಣೆ ದರೊಡೆ ಪ್ರಕರಣ 11) ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಕರಣ ಗಳಲ್ಲಿ ಅರೋಪಿಯಾಗಿರುತ್ತಾನೆ. ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ಹಾಗೂ ದಸ್ತಗಿರಿ ವಾರಂಟ್ ಇರುತ್ತದೆ.