Tuesday, April 30, 2024
Homeಕರಾವಳಿಕಾಸರಗೋಡುಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಂದು ತಾಯಿ ಆತ್ಮಹತ್ಯೆ

ಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಂದು ತಾಯಿ ಆತ್ಮಹತ್ಯೆ

spot_img
- Advertisement -
- Advertisement -

ಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನ ಮುಳ್ಳೇರಿಯ ಸಮೀಪ ನಡೆದಿದೆ. ಇಡುಕ್ಕಿ ತೊಡುಪುಳ ನಿವಾಸಿ ಶರತ್‌ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡ ತಾಯಿ.ಶ್ರೀನಂದಾ ಕೊಲೆಯಾದ ಹೆಣ್ಣು ಮಗು.

ಬಿಂದು ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದ ಬಳಿಕ ತನ್ನ ಕೈಯ ನರ ಕತ್ತರಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಂದು ಪತಿ ಶರತ್‌ ಇಸ್ರೇಲ್‌ನಲ್ಲಿ ಉದ್ಯೋಗಿಯಾಗಿದ್ದಾರೆ.

ಬಿಂದು ತೊಡುಪುಳದಲ್ಲಿರುವ ಪತಿಯ ಮನೆಯಿಂದ ಪುತ್ರಿ ಶ್ರೀನಂದ ಮತ್ತು ಪುತ್ರ ಶ್ರೀಹರಿಯೊಂದಿಗೆ ಕಳೆದ ಭಾನುವಾರ ಮುಳಿಯಾರು ಬಳಿಯ ಕೋಪಾಳಕೊಚ್ಚಿಗೆ ಬಂದಿದ್ದರು.ಎ.5ರಂದು ಮಧ್ಯಾಹ್ನ ಬಿಂದು ಮನೆ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದು, ಅವರ ಕೈಯ ನರ ಕತ್ತರಿಸಲ್ಪಟ್ಟು ರಕ್ತ ಸೋರುತ್ತಿತ್ತು. ಇದೇ ವೇಳೆ ಮಗು ಶ್ರೀನಂದ ಮನೆಯ ಮಲಗುವ ಕೊಠಡಿಯಲ್ಲಿ ಗಂಭೀರಾವಸ್ಥೆಯಲ್ಲಿ ಕಂಡು ಬಂದಿದ್ದು, ಅದನ್ನು ಕಂಡ ಮನೆಯವರು ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬಿಂದು ಮತ್ತು ಶರತ್‌ ಅವರ ವಿವಾಹ ಆರು ವರ್ಷಗಳ ವಿವಾಹವಾಗಿದ್ದರು.

ವಿಷಯ ತಿಳಿದ ಕಾಸರಗೋಡು ತಹಶೀಲ್ದಾರ್‌ ಪಿ.ಎಂ.ಅಬೂಬಕ್ಕರ್‌ ಸಿದ್ದಿಕ್‌, ಕಾಸರಗೋಡು ಡಿವೈಎಸ್‌ಪಿ ಜಯನ್‌ ಡೊಮಿನಿಕ್‌ ಹಾಗೂ ಆದೂರು ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂಜಯ್‌ ಕುಮಾರ್‌ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದು ಅವರ ನೇತೃತ್ವದಲ್ಲಿ ಮಹಜರು ನಡೆಸಿದ ಬಳಿಕ ಮೃತದೇಹಗಳನ್ನು ಉನ್ನತ ಮಟ್ಟದ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ.

ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!