ಬೆಂಗಳೂರಿನ ಕೆ.ಆರ್.ಪುರಂ ನ ಭೀಮಯ್ಯ ಲೇಔಟ್ ನಲ್ಲಿ ಬಾಲಕನೋರ್ವ ತನ್ನ ತಾಯಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ನಡೆದಿದೆ.
ಮೃತಪಟ್ಟ ತಾಯಿ ನೇತ್ರಾವತಿ (40) ಎಂದು ಗುರುತಿಸಲಾಗಿದೆ. ಹತ್ಯೆಗೈದವ ಪವನ್(ಮಗ)
ಘಟನೆಯ ವಿವರ: ಬಾಲಕನು ಅಪ್ರಾಪ್ತನಾಗಿದ್ದು, ಮುಳಬಾಗಿಲಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದನು. ಈತ ಬೆಳಗ್ಗೆ ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ತಾಯಿಗೆ ಊಟ ಬಡಿಸುವಂತೆ ಹೇಳಿದ್ದಾನೆ. ಆದರೆ ತಾಯಿ ಆ ಸಮಯದಲ್ಲಿ ಬೇರೆ ಕೆಲಸದಲ್ಲಿ ನಿರತಳಾಗಿದ್ದು, ಪವನ್ ಗೆ ಕೋಪದಲ್ಲಿ ‘ನೀನು ನನ್ನ ಮಗನೇ ಅಲ್ಲ, ನಿನಗೆ ಊಟ ಹಾಕಲ್ಲ’ ಎಂದು ಬೈದಿದ್ದಳು. ಅಷ್ಟಕ್ಕೇ ಕೋಪಗೊಂಡ ಮಗ, ರಾಡ್ನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ನೇತ್ರಾವತಿ ಅವರ ತಲೆಗೆ ಬಲವಾಗಿ ಏಟು ಬಿದ್ದಿದ್ದು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಕೊಲೆ ನಡೆದ ಬಳಿಕ ಮಗನೇ ಠಾಣೆಗೆ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.