Tuesday, July 2, 2024
Homeಕರಾವಳಿಮಂಗಳೂರುಉಳ್ಳಾಲ: ಕಡಲ್ಕೊರೆತ ಮತ್ತು ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು ಘಟನಾ ಸ್ಥಳಕ್ಕೆ ಸಂಸದ...

ಉಳ್ಳಾಲ: ಕಡಲ್ಕೊರೆತ ಮತ್ತು ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು ಘಟನಾ ಸ್ಥಳಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ

spot_img
- Advertisement -
- Advertisement -

ಉಳ್ಳಾಲ: ಮಳೆಯ ಹಿನ್ನೆಲೆಯಲ್ಲಿ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.‌ ಈ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಉಚ್ಚಿಲ, ಮೊಗವೀರ ಪಟ್ಟಣ, ಬಟಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

ಸಮುದ್ರ ತೀರದಲ್ಲಿ ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸಂಸದ ಚೌಟ, ಸಾಧ್ಯವಾಗುವ ಎಲ್ಲಾ‌ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದೇ ವೇಳೆ ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಸಂಭವಿಸಿದ ಸ್ಥಳಕ್ಕೆ ಕೂಡಾ ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಮೃತರ ಕುಟುಂಬ ಸದಸ್ಯರಿಗೆ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿರುವ ಸಂಸದರು, ಗ್ರಾಮವಾರು ಸರ್ವೇಕ್ಷಣೆ ನಡೆಸಿ ಅಪಾಯಕಾರಿ ಸ್ಥಳಗಳಲ್ಲಿ ವಾಸಿಸುತ್ತಿರುವ ಮನೆಗಳನ್ನು ಗುರುತಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದಾರೆ.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಲೋಕಸಭಾ ಅಧಿವೇಶನ ಮತ್ತು ಸಂಸದರಾಗಿ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಬ್ರಿಜೇಶ್ ಚೌಟ ನಿನ್ನೆ ಮಂಗಳೂರಿಗೆ ವಾಪಸಾಗಿದ್ದರು.

- Advertisement -
spot_img

Latest News

error: Content is protected !!