ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕಿಲ್ಲರ್ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಇದರ ನಡುವೆ ಗಣೇಶ ಚತುರ್ಥಿಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಮುಂಬೈಯಲ್ಲಂತೂ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಆದರೆ ಈ ಬಾರಿ ಗಣೇಶೋತ್ಸವ ನಡೆಸದಿರಲು ನಿರ್ಧರಿಸಲಾಗಿದೆ.
ಮುಂಬೈ ನಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊರೋನಾ ವೈರಸ್ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ, ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ನ ಲಾಲ್ ಬಾಗ್ ಚಾ ರಾಜ ಗಣೇಶೋತ್ಸವ ಮಂಡಲ ಈ ಬಾರಿ ಗಣೇಶೋತ್ಸವ ನಡೆಸದೇ ಇರಲು ನಿರ್ಧರಿಸಿದ್ದು, ಇದರ ಬದಲಾಗಿ ರಕ್ತದಾನ ಶಿಬಿರ ನಡೆಸಲು ತೀರ್ಮಾನಿಸಿದೆ.
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಲಾಲ್ ಬಗೂಚ ರಾಜ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಸುಧೀರ್ ಸಾಲ್ವಿ ಈ ಕುರಿತು ಮಾಹಿತಿ ನೀಡಿದರು. “ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಈ ಬಾರಿ ಗಣೇಶೋತ್ಸವ ನಡೆಸುವುದಿಲ್ಲ” ಎಂದು ಹೇಳಿದರು.
“ಗಣೇಶೋತ್ಸವ ನಡೆಯುವ ಜಾಗದಲ್ಲಿ ರಕ್ತ ಮತ್ತು ಪ್ಲಾಸ್ಮಾ ದಾನ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಅದ್ದೂರಿಯಾಗಿ ನಡೆಯುತ್ತಿದ್ದ ಉತ್ಸವಕ್ಕೆ ಆಗುತ್ತಿದ್ದ ಖರ್ಚನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತದೆ” ಎಂದರು.
“ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷದಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಗಣೇಶೋತ್ಸವ ಸಮಿತಿ ಪರವಾಗಿ ಪರಿಹಾರವನ್ನು ವಿತರಣೆ ಮಾಡಲಾಗುತ್ತದೆ” ಎಂದು ಸುಧೀರ್ ಸಾಲ್ಪಿ ತಿಳಿಸಿದರು.
ಕೊರೊನ ಕರಿನೆರಳು : ಮುಂಬೈನ ಪ್ರಸಿದ್ಧ ಲಾಲ್ ಬಾಗ್ ಚಾ ರಾಜ ಗಣೇಶೋತ್ಸವ ರದ್ದು
- Advertisement -
- Advertisement -
- Advertisement -
