Friday, June 27, 2025
Homeಕರಾವಳಿಮಂಗಳೂರುಮಂಗಳೂರು: ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮಂಗಳೂರು: ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

spot_img
- Advertisement -
- Advertisement -

ಮಂಗಳೂರು: ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ ) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿ ಯಾಗಿ,  3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟಲ್ಲಿದ್ದು ಅವರ ವೇಷದ ಸರಣಿಯ  ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.ಇವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 1.15 ಕ್ಕೆ ಕದ್ರಿ ರುದ್ರಭೂಮಿಯಲ್ಲಿ ನೆರವೇರಲಿದೆ. ಮಧ್ಯಾಹ್ನ 1 ಕ್ಕೆ ಕದ್ರಿ ಮಲ್ಲಿಕಟ್ಟೆ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

- Advertisement -
spot_img

Latest News

error: Content is protected !!