- Advertisement -
- Advertisement -
ಚಿಕ್ಕೋಡಿ: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪ್ರವೀಣ್ ಮಂಗಳೂರು ಏರ್ಪೋರ್ಟ್ನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದು, ಮೃತ ಅಝ್ನಾಝ್ ಕೂಡಾ ಏರ್ ಇಂಡಿಯಾ ಎಕ್ಸ್ ಪ್ರೆಸ್ ಕ್ಯಾಬಿನ್ ಕ್ರ್ಯೂ ಆಗಿದ್ದಳು.
ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದು, ಕುಡಚಿಯ ಸಂಬಂಧಿ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಕೊಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಕುಡಚಿಯಿಂದ ಉಡುಪಿಗೆ ಕರೆ ತರುತ್ತಿದ್ದಾರೆ.
- Advertisement -