Saturday, June 28, 2025
Homeಕರಾವಳಿಬಂಟ್ವಾಳ: ಹಿಂದೂ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಆರೋಪಿಯ ಕೊಲೆಗೆ ಯತ್ನ

ಬಂಟ್ವಾಳ: ಹಿಂದೂ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಆರೋಪಿಯ ಕೊಲೆಗೆ ಯತ್ನ

spot_img
- Advertisement -
- Advertisement -

ಬಂಟ್ವಾಳ: ಸಜೀಪ ಮುನ್ನೂರು ನಿವಾಸಿ, ಆರೆಸ್ಸೆಸ್ ಕಾರ್ಯಕರ್ತನಾಗಿದ್ದ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಇಂದು ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ನಡೆದಿದೆ.

ಮೃತ ಶರತ್ ಮಡಿವಾಳ

ಆಲಂಪಾಡಿ ಶಾರದಾ ನಗರದ ನಿವಾಸಿಯಾದ ಶರೀಫ್ ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್, ಒಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ್ದು, ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಶರೀಫ್

ಶರೀಫ್ ತೆರಳುತ್ತಿದ್ದ ಬೈಕಿಗೆ ದುಷ್ಕರ್ಮಿಗಳು ಬಂದ ಬೈಕನ್ನು ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ್ದಾರೆ. ಈ ಸಂದರ್ಭ ಬೈಕ್ ನಲ್ಲಿದ್ದ ಹಿಂಬದಿ ಸವಾರರು ಮತ್ತು ಕಾರಿನಲ್ಲಿದ್ದವರು ಇಳಿದು ಶರೀಫ್ ಗೆ ತಲವಾರು ಬೀಸಿ, ದುಷ್ಕರ್ಮಿಗಳ ತಂಡ ಪರಾರಿಯಾಗಿದೆ. ಗಾಯಾಳು ಶರೀಫ್ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
spot_img

Latest News

error: Content is protected !!