Wednesday, June 26, 2024
Homeಕರಾವಳಿಉಡುಪಿಉಡುಪಿ: ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ

ಉಡುಪಿ: ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ

spot_img
- Advertisement -
- Advertisement -

ಉಡುಪಿ: ತಂಡವೊಂದು ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿಯ ಪುತ್ತೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

 ಪುತ್ತೂರು ಗ್ರಾಮದ ಕೊಳಂಬೆ ಶಾಂತಿನಗರದ ಉಮೇಶ್ ಮೆಂಡನ್ ಎಂಬವರ ಮಗ ಶರತ್ ಎಂಬವರಿಗೆ ತಂಡವೊಂದು ಚಾಕುವಿನಿಂದ ಇರಿದಿದೆ.  ಶರತ್  ಕೆಲಸದ ಹುಡುಗ ಚರಣ್‌ ಎಂಬಾತನೊಂದಿಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಬೈಕಿನಲ್ಲಿ ಬಂದ ನಾಗರಾಜ್, ಕಾರ್ತಿಕ್, ದೇಶರಾಜು ಮತ್ತು ಇತರರು ಶರತ್‌ನನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿದರು. ಬಳಿಕ ಕೊಲ್ಲುವ ಉದ್ದೇಶದಿಂದ ಅವರು ತಂದಿದ್ದ ಚೂರಿಗಳಿಂದ ಏಕಾಏಕಿ ಶರತ್ ರನ್ನು ತಿವಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ.  

ಸುಮಾರು 15 ದಿನಗಳ ಹಿಂದೆ ಆರೋಪಿಗಳು ಶರತ್‌ನ ತಮ್ಮ ದೀಪಕ್ ಎಂಬವರಿಗೆ ಹಲ್ಲೆ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಶರತ್ ಆರೋಪಿಗಳಿಗೆ ಗದರಿಸಿರುವುದೇ ಈ ಕೃತ್ಯಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!