- Advertisement -
- Advertisement -
ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಪಿಂಕಿ ನವಾಝ್ (26) ಎಂಬಾತನ ಮೇಲೆ ಕಾಟಿಪಳ್ಳದಲ್ಲಿ ಇಂದು ಸಂಜೆ ಮಾರಕಾಸ್ತ್ರದಿಂದ ದಾಳಿ ನಡೆದಿದೆ.
ಪಿಂಕಿ ನವಾಝ್ ಕಾಟಿಪಳ್ಳದ ರಸ್ತೆಬದಿ ನಿಂತಿದ್ದ ಸಂದರ್ಭ ಸ್ಥಳಕ್ಕೆ ಧಾವಿಸಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆ.
ಈ ವೇಳೆ ನವಾಝ್ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡರೂ ದೇಹದ ವಿವಿಧೆಡೆ ಗಾಯಗಳಾಗಿವೆ. ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳ ಹಾಗೂ ಗಾಯಾಳು ದಾಖಲಾದ ಆಸ್ಪತ್ರೆಗೆ ಸುರತ್ಕಲ್ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ
- Advertisement -