Thursday, June 4, 2026
Homeತಾಜಾ ಸುದ್ದಿವಿಟ್ಲ: ಹಳೆ ದ್ವೇಷದಿಂದ ಯುವಕರ ಮೇಲೆ ಕೊಲೆ ಯತ್ನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ 

ವಿಟ್ಲ: ಹಳೆ ದ್ವೇಷದಿಂದ ಯುವಕರ ಮೇಲೆ ಕೊಲೆ ಯತ್ನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ 

- Advertisement -
- Advertisement -

ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ ನಡೆದ ಇಬ್ಬರು ಯುವಕರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಎಂಬುವವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಸೋಮವಾರ ಪೇಟೆ ನಿವಾಸಿ ಕೆ. ಮಹಮ್ಮದ್ ಶರೀಫ್ (33),  ವಿಟ್ಲದ ಉಕ್ಕುಡ ದರ್ಬೆ ನಿವಾಸಿ ಸಾದಿಕ್ (20) ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಎಸ್ಪಿ ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!