Thursday, June 4, 2026
Homeಅಪರಾಧಪರೀಕ್ಷೆ ಕಾರ್ಯ ಮುಗಿಸಿ ಹೊರಡುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್:‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನ...

ಪರೀಕ್ಷೆ ಕಾರ್ಯ ಮುಗಿಸಿ ಹೊರಡುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್:‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನ ಬರ್ಬರ ಹತ್ಯೆ

- Advertisement -
- Advertisement -

ರಾಯಚೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಸಮೀಪ ನಡೆದಿದೆ. ಇಲ್ಲಿನ ಪಿಯು ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಾಳಾಪುರ(59) ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಉಪನ್ಯಾಸಕ ಮಾನಪ್ಪ ಎಂಬುವರು ಪರೀಕ್ಷಾ ಕಾರ್ಯ ಮುಗಿಸಿಕೊಂಡು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಐಯಾಳಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಅಡ್ಡಗಟ್ಟಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!