- Advertisement -
- Advertisement -
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಶ್ರೀಗಳು ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ ಮುರುಘಾ ಶರಣರು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ನ್ಯಾಯಾಪೀಠವು ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆಗಳಿದ್ದರೇ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಇಂದಿಗೆ ಮುಂದೂಡಿತ್ತು. ಇಂದು ಮುರುಘಾ ಶ್ರೀಗಳ ಪರ ಸಲ್ಲಿಕೆ ಮಾಡಲಾಗಿದ್ದಂತ ಜಾಮೀನು ಅರ್ಜಿಯ ಸಂಬಂಧ ವಾದ-ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಿದಂತೆ ಆಗಿದೆ. ಸದ್ಯ ಶ್ರೀಗಳಿಗೆ ಜೈಲೇ ಗತಿ ಅನ್ನೋವಂತಾಗಿದೆ.
- Advertisement -