- Advertisement -
- Advertisement -
ಪುತ್ತೂರು; ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಯುವಕ ಪುತ್ತೂರಿನಲ್ಲಿ ಜೊತೆಯಾಗಿರೋದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಅವರನ್ನು ಪೊಲೀಸ್ ಠಾಣೆಗೆ ಕರೆ ತಂದ ಘಟನೆ ನಡೆದಿದೆ.
ವಿಚಾರಣೆ ವೇಳೆ ಯುವತಿ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡುವ ಆಮಿಷ ಒಡ್ಡಿ ಕರೆ ತಂದಿದ್ದಾನೆ ಎಂದು ಹೇಳಿದ್ದಾಳೆ ಎನ್ನಲಾಗಿದೆ. ಇದೀಗ ಇವರಿಬ್ಬರನ್ನು ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದು, ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಠಾಣೆಯ ಮುಂದೆ ಜಮಾಯಿಸಿದ್ದಾರೆ.
- Advertisement -