Sunday, April 28, 2024
Homeತಾಜಾ ಸುದ್ದಿಹೀಗೊಂದು‌ ಸಾಮರಸ್ಯದ ಬೆಸುಗೆ; ಅಯ್ಯಪ್ಪ ಮಾಲಾಧಾರಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಮುಸ್ಲಿಂ ಯುವಕರು

ಹೀಗೊಂದು‌ ಸಾಮರಸ್ಯದ ಬೆಸುಗೆ; ಅಯ್ಯಪ್ಪ ಮಾಲಾಧಾರಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಮುಸ್ಲಿಂ ಯುವಕರು

spot_img
- Advertisement -
- Advertisement -

ತಮಿಳುನಾಡು; ದೇಶದಾದ್ಯಂತ ಕೋಮು ಗಲಭೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇಲ್ಲೊಂದು ಸಾಮರಸ್ಯ ಬೆಸೆಯುವ ಕಾರ್ಯ ನಡೆದಿದೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಮುಸ್ಲಿಂ ಯುವಕರು ಊಟದ ವ್ಯವಸ್ಥೆ ಮಾಡಿ ಕೋಮು ಸೌಹಾರ್ದತೆ ಮೆರೆದಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾದುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನು ಒದಗಿಸುವ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಕಳೆದ ಐದು ವರ್ಷಗಳಿಂದಲೂ ಮುಸ್ಲಿಂ ಯುವಕರ ತಂಡ ಈ ಕಾರ್ಯವನ್ನು ಮಾಡುತ್ತಾ ಬರುತ್ತಿದೆ.

ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೂ ಆಹಾರ ಸಾಮಗ್ರಿಗಳನ್ನು ಕೊಟ್ಟು ಕಳುಹಿಸಲಾಗುತ್ತದೆ. ಈ ಯುವಕರ ಸೇವೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ‌.

- Advertisement -
spot_img

Latest News

error: Content is protected !!