ಪಾಟ್ನಾ: ಹಿಂದೂ ದೇವತೆಗಳ ಕುರಿತಾಗಿ ಬಿಹಾರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ವಿವಾದಾತ್ಮಕ ಹೇಳಿಕೊಂದನ್ನು ನೀಡಿದ್ದಾರೆ. ಸದ್ಯ ಶಾಸಕರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಲಾಲನ್ ಪಾಸ್ವಾನ್ ಭಾಗಲ್ಪುರ ಜಿಲ್ಲೆಯ ಪಿರ್ಪೈಂಟಿ ವಿಧಾನಸಭಾ ಕ್ಷೇತ್ರದ ಶಾಸಕ. ಇದೀಗ ಇವರು ಹಿಂದೂಗಳ ನಂಬಿಕೆಯಾದ ಲಕ್ಷ್ಮಿ ಪೂಜೆಯನ್ನು ಅವಹೇಳನ ಮಾಡುವ ಹೇಳಿಕೆ ನೀಡಿ ಫಜೀತಿಗೆ ಸಿಲುಕಿದ್ದಾರೆ.
ಕೇವಲ ಲಕ್ಷ್ಮಿಯನ್ನು ಪೂಜಿಸುವುದರಿಂದಲೇ ಸಂಪತ್ತು ಸಿಗುವುದಾದರೆ ಇಂದು ಮುಸ್ಲಿಮರು ಕೋಟ್ಯಧಿಪತಿಗಳಾಗುತ್ತಿರಲಿಲ್ಲ. ಯಾಕೆಂದರೆ ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ. ಆದರೆ ಅವರಲ್ಲಿ ಶ್ರೀಮಂತರಲಿಲ್ಲವೇ ಎಂದು ಶಾಸಕರು ಪ್ರಶ್ನಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಮುಸ್ಲಿಮರು ಸರಸ್ವತಿ ದೇವಿಯನ್ನು ಕೂಡ ಪೂಜಿಸುವುದಿಲ್ಲ. ಆದರೆ ಅವರಲ್ಲಿ ಪಂಡಿತರು, ವಿದ್ವಾಂಸರಿಲ್ಲವೇ. ಅವರು ಕೂಡ ಐಎಎಸ್, ಐಪಿಎಸ್ ಆಗಿಲ್ಲವೇ ಎಂದು ಮರು ಪ್ರಶ್ನೆ ಹಾಕುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ.