- Advertisement -
- Advertisement -
ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ರಾಷ್ಟ್ರಪತಿಗಳಿಂದ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಘೋಷಿಸಿದ್ದಾರೆ.
ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ರಾಜ್ಯ ಸರ್ಕಾರ ವತಿಯಿಂದ ಆಹ್ವಾನ ನೀಡಿ ಪತ್ರ ಬರೆಯಲಾಗಿತ್ತು. ಇಂದು ಒಪ್ಪಿಗೆ ಸೂಚಿಸಿ ರಾಷ್ಟ್ರಪತಿ ಭವನದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬಂದಿದೆ. ಸೆಪ್ಟೆಂಬರ್ 26 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ.
- Advertisement -