ಬೆಂಗಳೂರು: ಮೈಸೂರು ಪಾಲಿಕೆ ಅಯುಕ್ತೆ ಮತ್ತು ಜಿಲ್ಲಾಧಿಕಾರಿ ನಡುವಿನ ಕಿತ್ತಾಟವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಸೇರಿ ಒಟ್ಟು ಆರು ಜನ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ಶನಿವಾರ ಮಧ್ಯರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರೋಹಿಣಿ ಸಿಂಧೂರಿಯನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಹಾಗೂ ಶಿಲ್ವಾ ನಾಗ್ ರನ್ನು ನಿರ್ದೇಶಕಿ -RDPR-ಗ್ರಾಮಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಹೊಸ ಜಿಲ್ಲಾಧಿಕಾರಿಯಾಗಿ ಡಾ.ಬಗಾದಿ ಗೌತಮ್, ಮೈಸೂರು ಪಾಲಿಕೆ ಹೊಸ ಅಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕ ಮಾಡಲಾಗಿದೆ.
ಇನ್ನೂ ದಯಾನಂದ.ಕೆ.ಎಸ್- ವಿಶೇಷ ಅಯುಕ್ತ -ಬಿಬಿಎಂಪಿ(ಆಡಳಿತ) ನೇಮಕ , ಪಿ.ರಾಜೇಂದ್ರ ಚೋಳನ್ -ಬೆಸ್ಕಾಂ ಎಂ.ಡಿ – ಬಿಬಿಎಂಪಿ ವಿಶೇಷ ಅಯುಕ್ತರಾಗಿ ಹೆಚ್ಚುವರಿ ಹೊಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.