Friday, May 17, 2024
Homeಕರಾವಳಿನಟ ಜಗ್ಗೇಶ್ ಗೆ ಕನ್ನಡ ಪಾಠ ಮಾಡಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

ನಟ ಜಗ್ಗೇಶ್ ಗೆ ಕನ್ನಡ ಪಾಠ ಮಾಡಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

spot_img
- Advertisement -
- Advertisement -

ಬೆಂಗಳೂರು: ನಟ ಜಗ್ಗೇಶ್ ಗೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕನ್ನಡ ಪಾಠ ಮಾಡಿದ್ದಾರೆ.ಇತ್ತೀಚೆಗೆ ಜಗ್ಗೇಶ್  ಸೋಶಿಯಲ್ ಮೀಡಿಯಾದಲ್ಲಿ ಕಾಲು ಮುರಿದುಕೊಂಡಿರುವ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದರು. ಅದರಲ್ಲಿ ‘ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ. ಆರು ವಾರಗಳ ಕಾಲ ‘ದಿಘ್ಬಂಧನ’ ನಡಿಗೆಗೆ ಎಂದು ಬರೆದುಕೊಂಡಿದ್ದರು.

ಜಗ್ಗೇಶ್ ಹಾಕಿರುವ ಪೋಸ್ಟ್ ಗೆ ಕಮೆಂಟ್ ಮಾಡಿರುವ ನಾಗತಿಹಳ್ಳಿ ಚಂದ್ರಶೇಖರ್ , ‘ದಿಘ್ಬಂದನ ಅಲ್ಲ, ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ ಎಂದು ನಾಗತಿಹಳ್ಳಿ ಚಂದ್ರಶೇಖರ್ ಸೋಷಿಯಲ್ ಮೀಡಿಯಾದ ಮೂಲಕವೇ ಜಗ್ಗೇಶ್ ಅವರಿಗೆ ಕನ್ನಡ ಪಾಠ ಮಾಡಿದ್ದಾರೆ. ಮೂಳೆ ಮುರಿತ ಬೇಗ ಗುಣವಾಗಲಿ. ಸಕ್ಕರೆ ರೋಗವಿದ್ದಲ್ಲಿ ಹೆಚ್ಚು ಜೋಪಾನ ವಹಿಸಿ. ಶುಭವಾಗಲಿ. ಪ್ರೀತಿಯಿಂದ ನಾಗತಿಹಳ್ಳಿ ಚಂದ್ರಶೇಖರ್ ಎಂದು ಬರೆದಿದ್ದಾರೆ.

- Advertisement -
spot_img

Latest News

error: Content is protected !!