- Advertisement -
- Advertisement -
ರಾಯಚೂರು: ಕಾಂಗ್ರೆಸ್ನವರು ಲಿಂಗಾಯತ ನಾಯಕರನ್ನು ಸಿಎಂ ಅಭ್ಯರ್ಥಿ ಅಂತ ಘೋಷಿಸಲಿ ಎಂದು ನಳಿನ್ ಕುಮಾರ್ ಕಟೀಲ್ ಸವಾಲೆಸೆದಿದ್ದಾರೆ
ರಾಯಚೂರಿನಲ್ಲಿ ಮಾತನಾಡಿದ ಅವರು, ಲಿಂಗಾಯತ ನಾಯಕರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂದು ಆರೋಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಯಾವ ಸಮುದಾಯದವರಿಗೂ ನೋವುಂಟು ಮಾಡಿಲ್ಲ. ಬಿಜೆಪಿ ಪಕ್ಷದಲ್ಲೇ ಅತೀ ಹೆಚ್ಚು ಲಿಂಗಾಯತರಿದ್ದಾರೆ. ಕಾಂಗ್ರೆಸ್ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
- Advertisement -