- Advertisement -
- Advertisement -
ಬೆಂಗಳೂರು: “ಡಾll ರಾಜ್ ಕುಮಾರ್ ಜಯಂತಿ ” ಯ ಅಂಗವಾಗಿ ಅಖಿಲ ಕರ್ನಾಟಕ ಡಾll ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ ದ ವತಿಯಿಂದ ಆಯೋಜಿಸಲಾಗಿದ್ದ ಡಾll ರಾಜ್ ಕುಮಾರ್ ರಥೋತ್ಸವ ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಚಾಲನೆ ನೀಡಿದರು.
ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್. ರಮೇಶ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಚಿವರಾದ ಸೋಮಣ್ಣ, ಗೋಪಾಲಯ್ಯ, ಮುನಿರತ್ನ, ಸಂಸದ ಮುನಿಸ್ವಾಮಿ ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಿದ್ದರು.
ವಿಶ್ವದ ಚಲನಚಿತ್ರ ರಂಗದ ಇತಿಹಾಸದಲ್ಲಿ ಇದೇ ಪ್ರಥಮಬಾರಿಗೆ ವ್ಯಕ್ತಿಯೊಬ್ಬರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ರಥೋತ್ಸವವನ್ನು ಮಾಡಲಾಗಿದೆ ಎಂಬುದು ಕನ್ನಡಿಗರು ಹೆಮ್ಮೆ ಪಡಬೇಕಾದ ವಿಷಯ ಎಂದು ಇದೇ ವೇಳೆ ನಳೀನ್ ಕುಮಾರ್ ಕಟೀಲ್ ಹೇಳಿದ್ರು
- Advertisement -