ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಇಂದು ರೈತರಾಗಿದ್ದಾರೆ. ರಾಜಕೀಯ ಚಟುವಟಿಕೆ ಪಕ್ಕಕ್ಕಿಟ್ಟು ಗದ್ದೆಗಿಳಿದು ಭತ್ತ ಕೃಷಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ನೈತಾಡಿ ಗ್ರಾಮದ ಗದ್ದೆಯಲ್ಲಿ ನಳಿನ್ ಕುಮಾರ್ ಕಟೀಲ್ ಭತ್ತ ಕೃಷಿ ನಡೆಸಿದ್ದಾರೆ. ಎಡೆಬಿಡದೇ ಸುರಿಯುತ್ತಿರುವ ಮಳೆಯ ಮಧ್ಯೆ ನೈತಾಡಿಯ ಗದ್ದೆಯಲ್ಲಿ ನಳಿನ್ ಕೃಷಿ ಕಾರ್ಯ ನಡೆಸಿದ್ದಾರೆ.
ಟ್ರ್ಯಾಕ್ಟರ್ ಓಡಿಸಿ ಸ್ವತಃ ತಾವೇ ಗದ್ದೆಗೆ ಇಳಿದು ನಾಟಿ ಕಾರ್ಯ ಮಾಡಿದ ನಳೀನ್ ಕುಮಾರ್ ಕಟೀಲ್ ನೇಗಿಲು ಹಿಡಿದು ಉಳುಮೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಡೀಲು ಬಿದ್ದ ಗದ್ದೆಗಳಲ್ಲಿ ಭತ್ತ ಬೆಳೆಯಲು ಪ್ರೋತ್ಸಾಹಿಸುವ ಸಲುವಾಗಿ ನಳಿನ್ ಕುಮಾರ್ ಕಟೀಲ್ ಇಂದು ಗದ್ದೆಯಲ್ಲಿ ಉಳುಮೆ ಮಾಡಿ ಕೃಷಿ ಕಾರ್ಯ ನಡೆಸಿದ್ದಾರೆ.
ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಶಯದಂತೆ ಹಡೀಲು ಗದ್ದೆಯಲ್ಲಿ ಕೃಷಿ ಕಾರ್ಯ ನಡೆಯುತ್ತಿದ್ದು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೇತೃತ್ವ ವಹಿಸಿತ್ತು.