- Advertisement -
- Advertisement -
ಪುತ್ತೂರು: ಮಂಗಳೂರಿಗೆ ವಂದೇ ಭಾರತ್ ರೈಲು ಆಗಮನ ವಿಳಂಬವಾಗಲು ರೈಲ್ವೇ ಹಳಿಗೆ ವಿದ್ಯುದೀಕರಣ ಕಾಮಗಾರಿಗೆ ಅರಣ್ಯ ಇಲಾಖೆಯ ತಡೆಯೇ ಕಾರಣ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪುತ್ತೂರಿನಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್, ಮಂಗಳೂರು-ಬೆಂಗಳೂರು-ಮೈಸೂರು ಸಂಪರ್ಕದ ರೈಲು ಹಳಿಯ ವಿದ್ಯುದೀಕರಣ ಕಾಮಗಾರಿ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.
ವಿದ್ಯುದೀಕರಣ ಕಾಮಗಾರಿ ಶೀಘ್ರವೇ ಮುಗಿಯಲಿದ್ದು, ಆ ಬಳಿಕ ವಂದೇ ಭಾರತ್ ರೈಲು ಆಗಮಿಸಲಿದೆ, ದಕ್ಷಿಣ ಕನ್ನಡ
ಜಿಲ್ಲೆಯ ಹಲವು ಕಡೆಗಳಲ್ಲಿ ಕೆಳ ಸೇತುವೆ ಮತ್ತು ಮೇಲು ಸೇತುವೆ ಕಾಮಗಾರಿ ನಡೆಯುತ್ತಿದೆ ಎಂದು ಕೂಡಾ
ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
- Advertisement -