- Advertisement -
- Advertisement -
ಅಯೋಧ್ಯಾ: ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಜೊತೆಯಾಗಿ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ.
ಅಲ್ಲದೇ ರಾಮ ಮಂದಿರದ ಒಳಗೆ ಮತ್ತು ಹೊರಗೆ ಜೊತೆಯಾಗಿ ನಳೀನ್ ಕುಮಾರ್ ಕಟೀಲ್ ಮತ್ತು ಮಂಜುನಾಥ ಭಂಡಾರಿ ಫೋಟೋ ತೆಗೆಸಿಕೊಂಡಿದ್ದಾರೆ.
ಮಂಗಳವಾರ ಅಯೋಧ್ಯೆಗೆ ಕುಟುಂಬ ಸಮೇತ ತೆರಳಿದ್ದ ಸಂಸದ ನಳೀನ್ ಕುಮಾರ್ ಕಟೀಲ್, ಬಾಲರಾಮನಿಗೆ ಚಾಮರ ಸೇವೆ ಮತ್ತು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಎಂಎಲ್ಸಿ ಮಂಜುನಾಥ್ ಭಂಡಾರಿ ಕೂಡಾ ಕುಟುಂಬ ಸಮೇತರಾಗಿ ಅಯೋಧ್ಯೆಗೆ ಭೇಟಿ ನೀಡಿದ್ದರು.
ಮಾಜಿ ಶಾಸಕ ರಘುಪತಿ ಭಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸುದರ್ಶನ ಮೂಡಬಿದಿರೆ ಕೂಡಾ ಸಂಸದ ನಳೀನ್ ಕುಮಾರ್ ಕಟೀಲ್ ಜೊತೆ ಅಯೋಧ್ಯೆಗೆ ತೆರಳಿದ್ದರು.
- Advertisement -