Thursday, May 9, 2024
Homeಕರಾವಳಿಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಂಸದ ನಳೀನ್ ಕುಮಾರ್ ಕಟೀಲ್

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಂಸದ ನಳೀನ್ ಕುಮಾರ್ ಕಟೀಲ್

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಇಂದು ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಹಾಗೂ ಅಧಿಕಾರಿಗಳೊಂದಿಗೆ ನಳೀನ್ ಕುಮಾರ್ ಕಟೀಲ್, ಜೆಪ್ಪು ರೈಲ್ವೇ ಬ್ರಿಡ್ಜ್,‌ ಪಂಪ್ ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ನೀಡಲು ಸೂಚನೆ ನೀಡಿದ ಕಟೀಲ್, ಮಂಗಳವಾರ ಗೈಲ್ ಪೈಪ್ ಲೈನ್, ಜಲ ಮಂಡಳಿ, ಬಿಎಸ್ ಎನ್ ಎಲ್‌ ಸೇರಿದಂತೆ ಎಲ್ಲಾ ಅಧಿಕಾರಿಗಳ ಸಭೆ ಕರೆಯುವಂತೆ ಸೂಚಿಸಿದರು.

ಜೆಪ್ಪು ರೈಲ್ವೇ ರಸ್ತೆ ವಿಳಂಬದ ವಿರುದ್ದ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತರಾಟೆತ್ತಿಕೊಂಡ ನಳೀನ್ ಕುಮಾರ್ ಕಟೀಲ್, ತಕ್ಷಣ ಕಾಮಗಾರಿ‌ ಮುಗಿಸದಿದ್ದರೆ ಉದ್ಘಾಟನೆ ಮಾಡುವುದಾಗಿ ಎಚ್ಚರಿಸಿದರು.

ಅಲ್ಲದೇ, ಅಧಿಕಾರಿಗಳಿಗೆ ಅಂತಿಮ ಗಡುವು ಕೊಟ್ಟು ಕಾಮಗಾರಿ ಮುಗಿಸಲು ಸೂಚನೆ ನೀಡಿದ ಸಂಸದ ಕಟೀಲ್,
ಮುಂದಿನ ಮಂಗಳವಾರ ಸಭೆಗೆ ಮಾಹಿತಿ ಸಹಿತ ಹಾಜರಾಗಲು ನಿರ್ದೇಶನ ‌ನೀಡಿದರು.

- Advertisement -
spot_img

Latest News

error: Content is protected !!