- Advertisement -
- Advertisement -
ಹಾವೇರಿ: ಹಾವೇರಿ ನಗರದಲ್ಲಿರುವ ಹುಕ್ಕೇರಿ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿದರು.
ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಯವರನ್ನು ಭೇಟಿಯಾಗಿ ಕೆಲವು ಹೊತ್ತು ಸ್ವಾಮೀಜಿ ಜೊತೆ ಕಟೀಲ್ ಮಾತುಕತೆ ನಡೆಸಿದರು.
ಈ ವೇಳೆ ನಳೀನ್ ಕುಮಾರ್ ಕಟೀಲ್ ಗೆ ಶಾಲು ಮತ್ತು ಏಲಕ್ಕಿ ಮಾಲೆ ಹಾಕಿ ಸದಾಶಿವ ಸ್ವಾಮೀಜಿ ಆಶೀರ್ವಾದ ಮಾಡಿದರು.
ಈ ವೇಳೆ ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಹಾವೇರಿ ಶಾಸಕ ನೆಹರು ಓಲೇಕಾರ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.ಬಿಜೆಪಿ ಜನಸಂಕಲ್ಪ ಯಾತ್ರೆಯ ಭಾಗವಾಗಿ ನಳೀನ್ ಕುಮಾರ್ ಕಟೀಲ್ ಇಂದು ಹಾವೇರಿ ಜಿಲ್ಲಾ ಪ್ರವಾಸದಲ್ಲಿದ್ದಾರೆ.
- Advertisement -