Saturday, April 27, 2024
Homeಕರಾವಳಿಮಂಗಳೂರು; ನೀವು ಮತ್ತೊಮ್ಮೆ ತಿಹಾರ್ ಜೈಲಿಗೆ ಹೋಗಲು ರೆಡಿಯಾಗಿ; ಡಿಕೆಶಿ ವಿರುದ್ಧ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್...

ಮಂಗಳೂರು; ನೀವು ಮತ್ತೊಮ್ಮೆ ತಿಹಾರ್ ಜೈಲಿಗೆ ಹೋಗಲು ರೆಡಿಯಾಗಿ; ಡಿಕೆಶಿ ವಿರುದ್ಧ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

spot_img
- Advertisement -
- Advertisement -

ಮಂಗಳೂರು : ನೀವು ಮತ್ತೊಮ್ಮೆ ತಿಹಾರ್ ಜೈಲಿಗೆ ಹೋಗಲು ರೆಡಿಯಾಗಿ ಎಂದು ಡಿಕೆಶಿ ವಿರುದ್ಧ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಖಜಾನೆ ಹಣ ಸಿದ್ದರಾಮಯ್ಯ ಮತ್ತು ಡಿಕೆಶಿ ಮನೆಗೆ ಹೋಗಿದೆ, ಖಜಾನೆ ಖಾಲಿ ಮಾಡಿದ ಲೂಟಿಕೋರ ಸರ್ಕಾರ ತೊಲಗಬೇಕು. ಡಿಕೆ ಶಿವಕುಮಾರ್ ಅವರೇ ತಿಹಾರ್ ಜೈಲಿಗೆ ಈಗಾಗಲೇ ಹೋಗಿ ಬಂದಿದ್ದೀರಿ. ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗಿ ಎಂದು ಹೇಳಿಕೆ ನಿಡಿದ್ದಾರೆ.

ನಿಮ್ಮ ಸರ್ಕಾರದಲ್ಲಿ ಲಂಚಾವತಾರ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪಂಚ ರಾಜ್ಯ ಚುನಾವಣೆಗೆ ಕರ್ನಾಟಕ ಎಟಿಎಂ ಆಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ಗೆ ಕರ್ನಾಟಕದಿಂದ ಹಣ ಹೋಗುತ್ತಿದೆ.ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಯಲ್ಲಿ ರೇಟ್ ಫಿಕ್ಸ್ ಆಗಿದೆ, ರಾಜ್ಯದಲ್ಲಿ ಇರುವುದು 80 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ತಹಶೀಲ್ದಾರ್ ವಿಐಒಗಳು ಕೂಡ ಲಂಚವನ್ನು ಕೇಳುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸಿಎಂ ಮತ್ತು ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -
spot_img

Latest News

error: Content is protected !!