- Advertisement -
- Advertisement -
ಉಡುಪಿ: ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಗ್ಗೆ ಬಿರುಸಿನ ಚಟುವಟಿಕೆ ನಡೆಯುತ್ತಿದ್ದರೆ ಆಡಳಿತ ಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗದ್ದೆಗೆ ಇಳಿದು ನಾಟಿ ಮಾಡಿದ್ದಾರೆ. ಉಡುಪಿಯ ಸಣ್ಣಕ್ಕಿಬೆಟ್ಟು ಎಂಬಲ್ಲಿ ನಾಟಿ ಕೆಲಸ ಮಾಡಿರುವ ನಳೀನ್ ಕುಮಾರ್ ಕಟೀಲ್, ನಾಟಿ ಯಂತ್ರದ ಮೂಲಕ ಹಡಿಲು ಗದ್ದೆ ನಾಟಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಅಲ್ಲದೇ ಟ್ರ್ಯಾಕ್ಟರ್ ಹತ್ತಿ ಕೆಸರು ಗದ್ದೆಯಲ್ಲಿ ಕೆಲವು ಹೊತ್ತು ಉಳುಮೆ ಮಾಡಿದ್ದಾರೆ. ಕಟೀಲ್ ಜೊತೆ ಉಡುಪಿ ಶಾಸಕ ರಘುಪತಿ ಭಟ್ ಕೂಡಾ ಗದ್ದೆ ನಾಟಿ ಮಾಡಿದ್ದಾರೆ. ಕಳೆದ ವಾರ ಪುತ್ತೂರಿನಲ್ಲಿ ಹಡಿಲು ಗದ್ದೆ ನಾಟಿ ಮಾಡಿದ್ದ ನಳೀನ್ ಕುಮಾರ್ ಕಟೀಲ್ ಇಂದು ಉಡುಪಿಯಲ್ಲಿ ನಾಟಿ ಮಾಡಿದ್ದಾರೆ.
ಸಿಎಂ ಬದಲಾವಣೆ ಟೆನ್ಷನ್ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿಯಲ್ಲಿ ಮಳೆ ಹಾನಿ ಪ್ರದೇಶದಲ್ಲಿ ಪರಿಶೀಲನೆ ಮಾಡಿದರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೆನ್ಷನ್ ಫ್ರೀ ಆಗಿ ಗದ್ದೆಯಲ್ಲಿ ನಾಟಿ ಕೆಲಸ ಮಾಡಿದ್ದಾರೆ.
- Advertisement -