Thursday, June 4, 2026
Homeಪ್ರಮುಖ-ಸುದ್ದಿಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ : ಚೆಕ್ ವಿತರಣೆ ವಿಚಾರದಲ್ಲಿ ನಾರಾಯಣಾಚಾರ್ ಪುತ್ರಿಯರಿಂದ ಆಕ್ಷೇಪ

ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ : ಚೆಕ್ ವಿತರಣೆ ವಿಚಾರದಲ್ಲಿ ನಾರಾಯಣಾಚಾರ್ ಪುತ್ರಿಯರಿಂದ ಆಕ್ಷೇಪ

- Advertisement -
- Advertisement -

ಕೊಡಗು : ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಭೂಕುಸಿತದಿಂದ ಅರ್ಚಕ ನಾರಾಯಣಾಚಾರ್ ಮೃತಪಟ್ಟಿದ್ದರಿಂದ ಅವರ ಮಕ್ಕಳಾದ ಶಾರದಾ ಮತ್ತು ನಮಿತಾ ಅವರಿಗೆ ತಲಾ 2.5 ಲಕ್ಷ ರೂ. ಪರಿಹಾರದ ಚೆಕ್ ನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ವಿತರಿಸಿದರು.

ಅದೇ ರೀತಿ ನಾರಾಯಣಾಚಾರ್ ಅವರ ಅಣ್ಣ ಆನಂದ ತೀರ್ಥ ಆಚಾರ್ ಅವರು ಬ್ರಹ್ಮಚಾರಿಯಾಗಿದ್ದರಿಂದ ಅವರ ಸಹೋದರಿ ಸುಶೀಲ ಅವರಿಗೆ 5 ಲಕ್ಷ ರುಪಾಯಿಯ ಚೆಕ್ ನ್ನು ಸಚಿವರು ಹಸ್ತಾಂತರಿಸಿದರು. ಆದರೆ ಸುಶೀಲ ಅವರಿಗೆ ಚೆಕ್‌ ವಿತರಿಸಿದ್ದಕ್ಕೆ ನಾರಾಯಣಾಚಾರ್ ಮಕ್ಕಳಾದ ಶಾರದಾ ಮತ್ತು ನಮಿತ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಚೆಕ್‌ ವಿತರಣೆ ತಡೆ ಹಿಡಿಯುವಂತೆ ಒತ್ತಾಯಿಸಿದರು.

ಆನಂದ ತೀರ್ಥ ಆಚಾರ್‌ ಅವರು ಅವಿವಾಹಿತರಾಗಿದ್ದು, ಮೊದಲಿನಿಂದಲೂ ಸಹೋದರ ನಾರಾಯಣ ಆಚಾರ್‌ ಜತೆಯೇ ವಾಸವಾಗಿದ್ದರು. ಅವರ ಯೋಗ ಕ್ಷೇಮವನ್ನು ನಾರಾಯಣ ಆಚಾರ್‌ ಕುಟುಂಬದವರೇ ನೋಡಿಕೊಳ್ಳುತಿದ್ದು, ಅವರ ಸಹೋದರಿ ಸುಶೀಲ ಅವರು ಆನಂದ ತೀರ್ಥರಿಗೆ ಏನೂ ಮಾಡಿಲ್ಲ ಎಂಬುದು ಮಕ್ಕಳ ಆಕ್ಷೇಪವಾಗಿದೆ.

ಪರಿಹಾರದ ಚೆಕ್‌ ನ್ನು ನ್ಯಾಯಯುತವಾಗಿ ತಮಗೆ ನೀಡಬೇಕೆಂದು ಕೋರಿದರು. ಆದರೆ ಸಚಿವರು ನಿಯಮಾನುಸಾರ ಸಮೀಪದ ಸಂಬಂಧಿ ಸುಶೀಲ ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.

- Advertisement -

Latest News

error: Content is protected !!