- Advertisement -
- Advertisement -
ಬೆಲೂರು:ಇಲ್ಲಿನ ದೊಡ್ಡಗದ್ದವಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ದೇವಾಲಯದ ಕಾಳಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿರುವ ಘಟನೆ ವರದಿಯಾಗಿದೆ. ದುಷ್ಕರ್ಮಿಗಳು ರಾತ್ರಿ ದೇಗುಲದ ಮುಖ್ಯದ್ವಾರ ಒಡೆದು ಒಳನುಗ್ಗಿ ಪುರಾತನ ಕಾಳಿಯ ಮೂರ್ತಿಯನ್ನು ಅರ್ಧಭಾಗಕ್ಕೆ ತುಂಡರಸಿ ಹಾನಿ ಮಾಡಿದ್ದಾರೆ.
ಮೂರ್ತಿ ಸಂಪೂರ್ಣ ಹಾನಿಯಾಗಿದ್ದು ಈ ದೇವಾಲಯ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿತ್ತು. ಪ್ರಸ್ತುತ ಭಾರತೀಯ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿದೆ. ಆದರೆ ದೇವಾಲಯದ ರಕ್ಷಣೆಯ ಕಾರ್ಯ ಸಮರ್ಪಕವಾಗಿ ನಿರ್ವಹಿಸದೇ ಇರುವ ಕಾರಣ ಘಟನೆ ನಡೆದಿದೆ ಎಂಬುದು ಸ್ಥಳೀಯರ ಅಭಿಪ್ರಾಯ. ರಾಷ್ಟ್ರೀಯ ಸ್ಮಾರಕವೊಂದು ಈ ರೀತಿಯಾಗಿ ಭಗ್ನವಾಗಿರುವುದು ಖೇದಕರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
- Advertisement -