- Advertisement -
- Advertisement -
ಬೆಂಗಳೂರು: ಉಕ್ರೇನ್ ಮೃತಪಟ್ಟ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ನವೀನ್ ಪಾರ್ಥೀವ ಶರೀರ, ಇಂದು ಮಧ್ಯರಾತ್ರಿ 2.30ಕ್ಕೆ ಬೆಂಗಳೂರಿಗೆ ತಲುಪಲಿದೆ.
ಇಂದು ಮಧ್ಯರಾತ್ರಿ 2.30 ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಮಧ್ಯ ರಾತ್ರಿ 2:50ಕ್ಕೆ ನವೀನ್ ಮೃತ ದೇಹವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಬರಮಾಡಿಕೊಳ್ಳಲಿದ್ದಾರೆ.
ನಾಳೆ ಬೆಳಗ್ಗೆ ಮೃತ ನವೀನ್ ಹುಟ್ಟೂರು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಳಗೇರಿಗೆ ತೆರಳಲಿರುವ ಅವರು, ನವೀನ್ ಮೃತ ದೇಹಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
- Advertisement -