Thursday, April 25, 2024
Homeಕರಾವಳಿನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

spot_img
- Advertisement -
- Advertisement -

ಕೊಣಾಜೆ: ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಸಮೀಪದ ‘ಉಳ್ಳಾಲದ ನೇತ್ರಾವತಿ ಸೇತುವೆ’ಯಲ್ಲಿ ಬುಧವಾರ ರಾತ್ರಿ ಕಾರನ್ನು ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಉಳ್ಳಾಲ ಸಮೀಪದ ನದಿಯ ಮರಳಿನಲ್ಲಿ ಪತ್ತೆಯಾಗಿದೆ.

ಮೂಲತಃ ಸೋಮೇಶ್ವರ ಸಮೀಪದ ಕೊಲ್ಯದ ಪ್ರಸ್ತುತ ಕೊಣಾಜೆ ಪುಳಿಂಚಾಡಿ ನಿವಾಸಿ ವಿಕ್ರಂ ಮೃತ ವ್ಯಕ್ತಿ.

ಇವರ ಕಾರು ಬುಧವಾರ ರಾತ್ರಿ ಸುಮಾರು 10:30ಕ್ಕೆ ನೇತ್ರಾವತಿ ಸೇತುವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದರು. ಕಾರಿನ ಹೆಡ್‌ಲೈಟ್ ಉರಿಯುತ್ತಿದ್ದು, ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಆದರೆ ಕಾರಿನ ಮಾಲಕ ವಿಕ್ರಂ ಗಟ್ಟಿ ನಾಪತ್ತೆಯಾಗಿರುವುದನ್ನು ಗಮನಿಸಿ, ಅವರ ಕುಟುಂಬ ನೀಡಿರುವ ಪೊಲೀಸ್ ದೂರಿನ ಆಧಾರದ ಮೇಲೆ ಗುರುವಾರವಿಡೀ ಶೋಧ ನಡೆಸಲಾಗಿದೆ. ಆದರೆ ಇಂದು ಬೆಳಿಗ್ಗೆ ಇವರ ಮೃತದೇಹ ಉಳ್ಳಾಲ ನದಿಯ ಮರಳಿನಲ್ಲಿ ಪತ್ತೆಯಾಗಿದೆ.
ಕೊಣಾಜೆ ಸಮೀಪದ ಪುಳಿಂಚಾಡಿ ಬಳಿ ಹೊಸ ಮನೆಯಲ್ಲಿ ವಾಸವಾಗಿದ್ದ ವಿಕ್ರಂ ಗಟ್ಟಿ ಕೊಲ್ಯದಲ್ಲಿ ಗ್ಯಾರೇಜ್ ನಡೆಸುತ್ತಿದ್ದರು.

ಕೊಲ್ಯದಲ್ಲಿ ವಾಸವಾಗಿದ್ದ ವಿಕ್ರಮ್ ಗಟ್ಟಿ ಐದು ವರ್ಷಗಳ ಹಿಂದೆ ನರಿಂಗಾನ ವಿದ್ಯಾನಗರದ ಬಸ್ ಚಾಲಕ ಸತೀಶ್ ಗಟ್ಟಿಯ ಪುತ್ರಿ ಪ್ರತಿಕ್ಷಾ ಗಟ್ಟಿಯನ್ನು ವಿವಾಹವಾಗಿದ್ದರು. ಅವರಿಗೆ ನಾಲ್ಕು ವರ್ಷದ ಪುತ್ರ ಇದ್ದಾನೆ. ಒಂದೂವರೆ ವರ್ಷದ ಹಿಂದೆ ಕೊಣಾಜೆಯ ಪುಳಿಂಚಾಡಿ ಬಳಿ ಪ್ರತೀಕ್ಷಾ ಅವರ ಪಿತ್ರಾರ್ಜಿತ ಆಸ್ತಿಯಲ್ಲಿ ಮನೆ ನಿರ್ಮಿಸಿ ಅಲ್ಲೇ ಕುಟುಂಬ ಸಮೇತ ವಾಸವಾಗಿದ್ದರು. ವಿಕ್ರಂ ಗಟ್ಟಿ ನಾಪತ್ತೆಯಾಗಿರುವುದಾಗಿ ಅವರ ಸಹೋದರ ಜೀವನ್ ಗಟ್ಟಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಎ.15ರಂದು ರಾತ್ರಿ ಪುಳಿಂಚಾಡಿಯ ಮನೆಯಲ್ಲಿ ವಿಕ್ರಮ್‌ರ ಪತ್ನಿಯ ತಂದೆ, ತಾಯಿ ಹಾಗೂ ಪತ್ನಿ ಮಗು ಇದ್ದರು ಎನ್ನಲಾಗಿದೆ. 9 ಗಂಟೆಗೆ ಟಿ.ವಿ.ವೀಕ್ಷಿಸುತ್ತಿದ್ದಾಗ ದಿಢೀರನೆ ಕಾರಿನ ಬ್ಯಾಟರಿ ರೀಚಾರ್ಜ್ ಮಾಡುವ ಉದ್ದೇಶದಿಂದ ಕೊಣಾಜೆ ಪದವು ತನಕ ಹೋಗಿ ಬರುತ್ತೇನೆಂದು ಹೇಳಿ ವಿಕ್ರಂ ಮನೆಯಿಂದ ಹೊರಟಿದ್ದರೆನ್ನಲಾಗಿದೆ. ಬಳಿಕ ಮನೆ ಮಂದಿ ಕರೆ ಮಾಡಿದಾಗ ಅವರ ಮೊಬೈಲ್ ಪೋನ್ ಸ್ವಿಚ್ ಆಫ್ ಬರುತ್ತಿತ್ತು ಎಂದು ಕೊಣಾಜೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ವಿಕ್ರಂ ಗಟ್ಟಿ ನೇತ್ರಾವತಿ ಸೇತುವೆಯಲ್ಲಿ ತನ್ನ ಕಾರನ್ನು ಬಿಟ್ಟು ಮೊಬೈಲ್ ಸ್ವಿಚ್ಡ್ ಆಫ್ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ. ಆದಾಗ್ಯೂ ಅವರಿಗಾಗಿ ಶೋಧ ಮುಂದುವರಿದಿದೆ.

- Advertisement -
spot_img

Latest News

error: Content is protected !!