Tuesday, May 14, 2024
Homeಕರಾವಳಿಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿರುವ ಶಂಕೆ - ಮುಳುಗುತಜ್ಞರಿಂದ ಹುಡುಕಾಟ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿರುವ ಶಂಕೆ – ಮುಳುಗುತಜ್ಞರಿಂದ ಹುಡುಕಾಟ

spot_img
- Advertisement -
- Advertisement -

ಮಂಗಳೂರು: ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿಯಾಗಿರುವ ಮಹಿಳೆಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ಪಾಣೆಮಂಗಳೂರು ನೂತನ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.

ಅವರು ಅಕ್ಕನ ಮನೆ ಬಿಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿ ಕೆಲದಿನಗಳಿಂದ ತಂಗಿದ್ದರು. ಶುಕ್ರವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಮಹಿಳೆ ಮುಂಜಾನೆ 5 ಗಂಟೆಯ ವೇಳೆ ಮನೆಯಲ್ಲಿ ಇಲ್ಲದೆ ಕಾಣೆಯಾಗಿದ್ದಾರೆ.

ಮನೆಯವರು ಹುಡುಗಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಯ ಮೇಲೆ ಮಹಿಳೆ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಬಿದ್ದಿದೆ. ಹಾಗಾಗಿ ಅವರು ನೇತ್ರಾವತಿ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದು ಮುಖ್ಯವಾಗಿ ಈ ಹಿಂದೆಯು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಶಂಕಿಸಲು ಪ್ರಮುಖ ಕಾರಣವಾಗಿದೆ.

- Advertisement -
spot_img

Latest News

error: Content is protected !!