ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿದ್ದಾರೆ. ಇಂದು ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವಂತ ಲೀಸ್ಟ್ ರೆಡಿ ಇದೆ. ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಜ.13ರಂದು ನಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನೇತೃತ್ವದ ಸಂಪುಟ ವಿಸ್ತರಣೆಯಲ್ಲಿ ಏಳು ಶಾಸಕರು ಮಂತ್ರಿಗಿರಿ ಅಲಂಕರಿಸಿದ್ದಾರೆ. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿದ್ದಾರೆ. ಮೂಲಗಳ ಪ್ರಕಾರ ಹಾಲಿ ಇರುವ ಕನಿಷ್ಠ 10 ಖಾತೆಗಳು ಅದಲುಬದಲಾಗುವ ಸಾಧ್ಯತೆ ಇದೆ. ಇಂದು ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದರ ಸಂಭವನೀಯ ಪಟ್ಟಿ ಇಲ್ಲಿದೆ.
ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಸಂಭಾವ್ಯ ಪಟ್ಟಿ
ಎಸ್ ಅಂಗಾರ- ಮೀನುಗಾರಿಕೆ, ಬಂದರು
ಕೋಟಾ ಶ್ರೀನಿವಾಸ ಪೂಜಾರಿ-ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ
ಉಮೇಶ್ ಕತ್ತಿ -ಆಹಾರ, ನಾಗರಿಕ ಪೂರೈಕೆ ಇಲಾಖೆ
ಬಸವರಾಜ ಬೊಮ್ಮಾಯಿ- ಗೃಹ, ಕಾನೂನು, ಸಂಸದೀಯ ವ್ಯವಹಾರ
ಜೆ.ಸಿ. ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ
ಸಿ.ಸಿ. ಪಾಟೀಲ್-ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ
ಅರವಿಂದ ಲಿಂಬಾವಳಿ-ಅರಣ್ಯ
ಮುರುಗೇಶ್ ನಿರಾಣಿ- ಗಣಿ, ಭೂ ವಿಜ್ಞಾನ
ಎಂಟಿಬಿ ನಾಗರಾಜ್- ಅಬಕಾರಿ
ಡಾ.ಕೆ. ಸುಧಾಕರ್-ಆರೋಗ್ಯ
ಆನಂದ್ ಸಿಂಗ್ -ಪ್ರವಾಸೋದ್ಯಮ, ಪರಿಸರ ಇಲಾಖೆ
ಸಿ.ಪಿ. ಯೋಗೇಶ್ವರ್ -ಸಣ್ಣ ನೀರಾವರಿ
ಆರ್. ಶಂಕರ್-ಪೌರಾಡಳಿ ಹಾಗೂ ರೇಷ್ಮೆ ಇಲಾಖೆ
ಗೋಪಾಲಯ್ಯ-ತೋಟಗಾರಿಕೆ, ಸಕ್ಕರೆ
ಕೆ.ಸಿ. ನಾರಾಯಣ ಗೌಡ- ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗುತ್ತದೆ ಎನ್ನಲಾಗಿದೆ.