- Advertisement -
- Advertisement -
ಬೆಂಗಳೂರು: ಸಚಿವ ಸಂಪುಟಕ್ಕೆ ಹೊಸದಾಗಿ ಯಾರು ಸೇರಿಕೊಳ್ಳುತ್ತಾರೆ ಎಂಬ ಕುತೂಹಲಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊನೆಗೂ ತೆರೆ ಎಳೆದಿದ್ದಾರೆ. ಹೊಸದಾಗಿ ಏಳು ಮಂದಿ ಸಿಎಂ ಬಿಎಸ್ವೈ ಸಚಿವ ಸಂಪುಟ ಸೇರಲಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಏಳು ಸಚಿವರ ಹೆಸರಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೇಶ್ವರ್ ಹಾಗೂ ಅರವಿಂದ ಲಿಂಬಾವಳಿಗೆ ಸ್ಥಾನ ನೀಡಲಾಗಿದೆ ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
- Advertisement -