ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟಕ್ಕೆ 29 ಮಂದಿ ನೂತನ ಸಚಿವ ಸೇರ್ಪಡೆಯಾಗಿದೆ. ಇಂದು ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ 29 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇನ್ನು ವಿವಿಧ ಕಾರಣಗಳಿಂದ ಮಾಜಿ ಸಚಿವರಾದ ಜಗದೀಶ್ ಶೆಟ್ಟರ್, ಆರ್. ಶಂಕರ್, ಸಿ. ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್, ಎಸ್. ಸುರೇಶ್ ಕುಮಾರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.
ರಾಜ್ಯ ಸರ್ಕಾರದಲ್ಲಿ ಒಟ್ಟು 34 ಶಾಸಕರು ಸಚಿವರಾಗಬಹುದು. ಉಳಿದಿರುವ 4 ಸ್ಥಾನಗಳನ್ನು ಕಾಯ್ದಿರಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ. ಮಂತ್ರಿ ಹುದ್ದೆ ಸಿಗದೇ ಅಸಮಾಧಾನ ಹೆಚ್ಚಾದಲ್ಲಿ ಅಂಥವರಿಗೆ ಮಂತ್ರಿ ಪದವಿ ಕೊಡಲು ಬಿಜೆಪಿ ತೀರ್ಮಾನ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರಿದ ಸಚಿವರ ಪಟ್ಟಿ ಹೀಗಿದೆ.
1. ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ
2. ಬೀಳಗಿ ಶಾಸಕ ಮುರುಗೇಶ್ ನಿರಾಣಿ
3. ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ
4. ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು
5. ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್
6. ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್
7. ಕೆ.ಆರ್. ಪೇಟೆ ಶಾಸಕ ಡಾ. ಕೆ.ಸಿ. ನಾರಾಯಣಗೌಡ
8. ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ
9. ಆರ್.ಆರ್. ನಗರ ಶಾಸಕ ಮುನಿರತ್ನ
10. ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್
11. ಕೆ.ಆರ್. ಪುರ ಶಾಸಕ ಭೈರತಿ ಬಸವರಾಜು
12. ಔರಾದ್ ಶಾಸಕ ಪ್ರಭು ಚೌಹಾಣ್
13. ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ
14. ಗೋವಿಂದರಾಜನಗರ ಶಾಸಕ ವಿ. ಸೋಮಣ್ಣ
15. ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ
16. ಹುಕ್ಕೇರಿ ಶಾಸಕ ಉಮೇಶ್ ಕತ್ತಿ
17. ಮಲ್ಲೇಶ್ವರ ಶಾಸಕ ಡಾ. ಅಶ್ವಥ್ ನಾರಾಯಣ್
18. ಮುಧೋಳ ಶಾಸಕ ಗೋವಿಂದ ಕಾರಜೋಳ
19. ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ. ನಾಗರಾಜ್
20. ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್
21. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್
22. ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ನಾಯಕ್
23. ತಿಪಟೂರು ಶಾಸಕ ಬಿ.ಸಿ. ನಾಗೇಶ್
24. ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ
25. ಸುಳ್ಯ ಶಾಸಕ ಎಸ್. ಅಂಗಾರ
26. ವಿಜಯನಗರ ಶಾಸಕ ಆನಂದ್ ಸಿಂಗ್
27. ನರಗುಂದ ಶಾಸಕ ಸಿ. ಸಿ. ಪಾಟೀಲ್
28. ಪದ್ಮನಾಭನಗರ ಶಾಸಕ ಆರ್. ಅಶೋಕ್
29. ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ. ಮಾಧುಸ್ವಾಮಿ