Sunday, May 12, 2024
Homeತಾಜಾ ಸುದ್ದಿSSLC ವಿದ್ಯಾರ್ಥಿಗಳ ಗಮನಕ್ಕೆ- ಜಿಲ್ಲೆಗೆ ಪ್ರಥಮಸ್ಥಾನ ಬರುವ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಪ್ರಶಸ್ತಿ ಘೋಷಣೆ

SSLC ವಿದ್ಯಾರ್ಥಿಗಳ ಗಮನಕ್ಕೆ- ಜಿಲ್ಲೆಗೆ ಪ್ರಥಮಸ್ಥಾನ ಬರುವ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಪ್ರಶಸ್ತಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಸಿ ಕುಮಾರ ಅವರು ಆದೇಶ ಹೊರಡಿಸಿದ್ದು, ಪ್ರತಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ ನಗದು ಪ್ರಶಸ್ತಿಯನ್ನು ನೀಡಲು, ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ 60 ಲಕ್ಷ ರೂ ಗಳನ್ನು ಸಮಾಜ ಕಲ್ಯಾಣ ಇಲಾಖೆಗೆ ನಿಗದಿಪಡಿಸಲಾಗಿದೆ.

- Advertisement -
spot_img

Latest News

error: Content is protected !!