Saturday, June 6, 2026
Homeಕರಾವಳಿಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬೆಳ್ತಂಗಡಿಯ ನವ ವಿವಾಹಿತೆ ದಾರುಣ ಮೃತ್ಯು

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬೆಳ್ತಂಗಡಿಯ ನವ ವಿವಾಹಿತೆ ದಾರುಣ ಮೃತ್ಯು

- Advertisement -
- Advertisement -

ಪುತ್ತೂರು: ಕೋಳಿ ಸಾಗಾಟದ ಲಾರಿ ಮತ್ತು ವ್ಯಾಗನರ್ ಕಾರು ನಡುವೆ ಡಿಕ್ಕಿ ಸಂಭವಿಸಿ ಬೆಳ್ತಂಗಡಿಯ ನವವಿವಾಹತೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23ವ)ರವರು ಮೃತಪಟ್ಟವರು. ದಾರಂದಕುಕ್ಕು ನಿವಾಸಿ ಸವಿತಾ ಉದಯ ಕುಮಾರ್ ನಾಯಕ್ ಅವರ ಪುತ್ರ ಗೋಪಿಕ್ ಮತ್ತು ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿ ಧನುಷಾ ಅವರ ವಿವಾಹ ಫೆ.21ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದಿತ್ತು.

ವಿವಾಹದ ಬಳಿಕ ದಾರಂದಕುಕ್ಕು ಮನೆಯಲ್ಲಿದ್ದ ನವ ದಂಪತಿ ತನ್ನ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಅವರ ಜೊತೆ ಎ.3ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆಂದು ನಸುಕಿನ ಜಾವ ಮಾರುತಿ ವ್ಯಾಗನರ್ ಕಾರಿನಲ್ಲಿ ಹೊರಟ್ಟಿದ್ದರು. ಕಾರು ಬೆಂಗಳೂರು ನೆಲಮಂಗಲಕ್ಕೆ ತಲುಪುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಕಾರಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಅವರು ಮೃತಪಟ್ಟಿದ್ದರು. ಉಳಿದಂತೆ ಗೋಪಿಕ್ ಮತ್ತು ಸಂಬಂಧಿಕರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!