Friday, April 19, 2024
Homeಕರಾವಳಿಸುಳ್ಯ; ಮದ್ದು ತರಲು ಹೋದ ನವವಿವಾಹಿತೆ ನಾಪತ್ತೆ

ಸುಳ್ಯ; ಮದ್ದು ತರಲು ಹೋದ ನವವಿವಾಹಿತೆ ನಾಪತ್ತೆ

spot_img
- Advertisement -
- Advertisement -

ಸುಳ್ಯ: ಮದ್ದು ತರಲು ಎಂದು ಮನೆಯಿಂದ ಹೋದ ನವವಿವಾಹಿತೆಯೊಬ್ಬರು ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.ಮರ್ಕಂಜದ ರಾಜಶೇಖರ ಎಂಬವರ ಪತ್ನಿ ನವ ವಿವಾಹಿತೆ ಕೀರ್ತಿಶ್ರೀ (26) ನಾಪತ್ತೆಯಾದವರು.

 ಕೀರ್ತಿಶ್ರೀ  ಜ.21ರಂದು ಎಲಿಮಲೆಯಲ್ಲಿರುವ ಆಸ್ಪತ್ರೆ ಔಷಧಿಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ.ಆರೋಗ್ಯ ಸರಿ ಇಲ್ಲವೆಂದು ನನ್ನ ಪತ್ನಿ ನನ್ನ ಬಳಿ ಹೇಳಿದ್ದು ನಾನು ಆಕೆಯನ್ನು ಆಸ್ಪತ್ರೆಗೆ ಹೋಗಲೆಂದು ನನ್ನ ಮನೆಯಿಂದ ನನ್ನ ಜೀಪಿನಲ್ಲಿ ಬೆಳಿಗ್ಗೆ 10 ಗಂಟೆಗೆ ಕರೆದುಕೊಂಡು ಹೋಗಿದ್ದು ಬಳಿಕ ಎಲಿಮಲೆಯ ಕ್ಲಿನಿಕ್ ಗೆ ಹೋಗಲೆಂದು ಆಕೆಯನ್ನು ಬಸ್ಸಿನಲ್ಲಿ ಹತ್ತಿಸಿದ್ದೆ. ಬಳಿಕ 10.30 ಕ್ಕೆ ಅವಳ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ನಾನು ಆಕೆಯ ತಾಯಿಯ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿಗೂ ಕೂಡ ಆಕೆ ಬಂದಿಲ್ಲ ಎಂದಿದ್ದಾರೆ.

ನಂತರ ನಮಗೆ ತಿಳಿದಿರುವ ಎಲ್ಲಾ ಕಡೆಗಳಲ್ಲಿ ಆಕೆಯ ಸಂಬಂಧಿಕರ ಮನೆಗಳಲ್ಲಿಯೂ ಕೂಡ ವಿಚಾರಿಸಿದಾಗ ಯಾವುದೇ ಮಾಹಿತಿ ಲಭಿಸಿರುವುದಿಲ್ಲ. ಆದ್ದರಿಂದ ಕಾಣೆಯಾಗಿರುವ ತನ್ನ ಪತ್ನಿಯನ್ನು ಪತ್ತೆ ಮಾಡಿಕೊಡಬೇಕೆಂದು ಸುಳ್ಯ ಪೊಲೀಸ್ ಠಾಣೆಗೆ ಪತಿ ರಾಜಶೇಖರ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!