- Advertisement -
- Advertisement -
ಪುತ್ತೂರು: 7 ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಸಮೀಪ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ವೈಶಾಲಿ(26) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ.
ವೈಶಾಲಿ ಅವರ ವಿವಾಹ ಜಯಪ್ರಕಾಶ್ ಎಂಬವರ ಜೊತೆ 7 ತಿಂಗಳ ಹಿಂದೆ ನಡೆದಿತ್ತು. ಶನಿವಾರ ಸಂಜೆ ಪತಿಯ ಮನೆಯಲ್ಲಿದ್ದ ವೈಶಾಲಿ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ತಾಯಿ ನೀಡಿದ ದೂರಿನಂತೆ ಸಂಪ್ಯ ಠಾಣೆಯ ಪೊಲೀಸರು ಪ್ರಕರಣ ದಾಖಿಲಿಸಿಕೊಂಡಿದ್ದಾರೆ.
- Advertisement -