- Advertisement -
- Advertisement -
ಹಾವೇರಿ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಸಭೆಯಲ್ಲಿ ಒಟ್ಟು 46 ಮತದಾರರು ತಮ್ಮ ಮತ ಚಲಾವಣೆ ಮಾಡಿದ್ದು, 17 ಮತಗಳು ಮಂಡ್ಯ ಜಿಲ್ಲೆಗೆ ಬಂದಿವೆ.
ಬಳ್ಳಾರಿ ಜಿಲ್ಲೆಗೆ 16 ಮತಗಳು ಬಂದಿದ್ದರೆ, ಉತ್ತರ ಕನ್ನಡ ಜಿಲ್ಲೆಗೆ ಒಂದೂ ಮತವೂ ಬರಲಿಲ್ಲ. ಹೀಗಾಗಿ ಅತಿ ಹೆಚ್ಚು ಮತ ಪಡೆದ ಮಂಡ್ಯ ಜಿಲ್ಲೆಯಲ್ಲಿ ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ.
- Advertisement -