- Advertisement -
- Advertisement -
ಬಂಟ್ವಾಳ : ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಮನೆಯ ಮೇಲೆ ಇಂದು ಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಇನ್ನು ದಾಳಿಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಿಯಾಝ್ ಫರಂಗಿಪೇಟೆ, ಎನ್ ಐ ಎ ಜುಲೈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆ ಕೇಳಿತ್ತು. ದಾಖಲೆಗಳ ಪರಿಶೀಲನೆ ನಡೆಸಿದೆ. ಮುಂದೆಯೂ ತನಿಖೆಗೆ ಸಹಕಾರ ನೀಡುತ್ತೇನೆ. ನನ್ನ ಮತ್ತು ನನ್ನ ಪತ್ನಿಯ ಮೊಬೈಲ್ ನ್ನು ಎನ್ ಐ ಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಹಾಗೇ ಎನ್ ಐಎ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ. ಎನ್ಐಎ ತನಿಖೆ ಪಾರದರ್ಶಕವಾಗಿರಲಿ ಎಂದು ಹೇಳಿದ್ದಾರೆ.
- Advertisement -