- Advertisement -
- Advertisement -
ಬಂಟ್ವಾಳ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಮೊನ್ನೆ 33 ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಒಂದಷ್ಟು ಪ್ರಮುಖ ಸಾಕ್ಷ್ಯಗಳು ಈ ವೇಳೆ ಅಧಿಕಾರಿಗಳಿಗೆ ಲಭ್ಯವಾಗಿತ್ತು.
ಇನ್ನು ಇಂದು ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕ ತಾಂಟ್ರೆ ನೀ ಬಾ ತಾಂಟ್ ಖ್ಯಾತಿಯ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ ಐ ಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ರಿಯಾಜ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಮನೆ ಮುಂದೆ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
- Advertisement -